ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ಇನ್ನು ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ನಲ್ಲಿ ಭಾನುವಾರ ಬೆಳಗ್ಗೆ ಹೊರಟಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…