Featured

ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ – vishwanews24

ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ: ಕಾರ್ಕಳದ ಮಹಿಳೆಯೊಬ್ಬರು ಆನ್ಲೈನ್ ವಂಚನೆ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ (38) ಇವರು ಜನವರಿ 7 ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬ್ರದಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿದ್ದಾನೆ.

ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ.

ನಂತರ ಸಂತ್ರಸ್ಥೆಯ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಿ, ಅಪಾದಿತರ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂಪಾಯಿ ಮತ್ತು ಯೆಸ್ ಬ್ಯಾಂಕ್ ಖಾತೆಗೆ ರೂಪಾಯಿ 10 ಲಕ್ಷ ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವಗಾ್ವಣೆ ಮಾಡಿಸಿಕೊಂಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago