ಕಾರ್ಕಳ: ಕಾರ್ಕಳದ ಮಹಿಳೆಯೊಬ್ಬರು ಆನ್ಲೈನ್ ವಂಚನೆ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ (38) ಇವರು ಜನವರಿ 7 ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯು ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬ್ರದಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿದ್ದಾನೆ.
ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ.
ನಂತರ ಸಂತ್ರಸ್ಥೆಯ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಿ, ಅಪಾದಿತರ ಫೆಡರಲ್ ಬ್ಯಾಂಕ್ನ ಖಾತೆಗೆ 14 ಲಕ್ಷ ರೂಪಾಯಿ ಮತ್ತು ಯೆಸ್ ಬ್ಯಾಂಕ್ ಖಾತೆಗೆ ರೂಪಾಯಿ 10 ಲಕ್ಷ ಹಣವನ್ನು ಎಫ್ಡಿ ಖಾತೆಯಿಂದ ಆರ್ಟಿಜಿಎಸ್ ಮೂಲಕ ವಗಾ್ವಣೆ ಮಾಡಿಸಿಕೊಂಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…