Featured

ಕಾರ್ಕಳ:  ಆನ್‌ಲೈನ್ ವಂಚನೆ -7.63 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ – Vishwanews24

ಕಾರ್ಕಳ:  ಆನ್‌ಲೈನ್ ವಂಚನೆ -7.63 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ

ಕಾರ್ಕಳ: ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಯಿಂದ 7.63 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವಂಚನೆಗೊಳಗಾದವರು ಕಾರ್ಕಳದ ಎಸ್‌ಬಿಐ ಮತ್ತು ಐಸಿಐಸಿಐ ಬ್ಯಾಂಕ್‌ಗಳಲ್ಲಿ ಎಸ್‌ಬಿ ಖಾತೆಗಳನ್ನು ಹೊಂದಿದ್ದಾರೆ.

ಫೆಲಿಕ್ಸ್ ಡಯಸ್ ಎಂಬ ಫೇಸ್‌ಬುಕ್ ಖಾತೆದಾರನು ಫೆಬ್ರವರಿ 4ರಂದು ಕಾರ್ಕಳ ಮೂಲದ ವ್ಯಕ್ತಿಗೆ ಪರಿಚಯವಾಗಿದ್ದ. ಅವನು ಯುರೋಪ್‌ನ ಸೈಪ್ರಸ್‌ನಲ್ಲಿ ಇದ್ದಾನೆ ಎಂದು ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇಗೆ ಉಡುಗೊರೆಯಾಗಿ ಸಂತ್ರಸ್ತರಿಗೆ ಪಾರ್ಸೆಲ್‌ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ. ವಂಚಕನು ಫೆಬ್ರವರಿ 13ರಂದು ಸಂತ್ರಸ್ತೆಯ ವಾಟ್ಸ್ ಆ್ಯಪ್ ಸಂಖ್ಯೆಗೆ ಪಾರ್ಸೆಲ್‌ಗಳ ಫೋಟೋವನ್ನು ಕಳುಹಿಸಿದ್ದ.

ಈ ನಡುವೆ, ದೆಹಲಿ ವಿಮಾನ ನಿಲ್ದಾಣದ ಸಿಬ್ಬಂದಿಯಂತೆ ಅಪರಿಚಿತ ವ್ಯಕ್ತಿ 9870189535 ಸಂಖ್ಯೆಯಿಂದ ದೂರವಾಣಿ ಕರೆ ಮಾಡಿ ಪಾರ್ಸೆಲ್ ಗ್ರೌಂಡ್ ಪಾಸ್‌ಗಾಗಿ ರೂ 47,000 ರೂ. ಪಾವತಿಸುವಂತೆ ಸೂಚಿಸಿದ್ದ. ಇದನ್ನು ನಂಬಿದ ವ್ಯಕ್ತಿ ವಂಚಕ ತಿಳಿಸಿದ ಖಾತೆಗೆ ಹಣ ವರ್ಗಾಯಿಸಿದ್ದರು. ಬಳಿಕ ವಂಚಕ ವಿವಿಧ ಕಾರಣಗಳನ್ನು ನೀಡಿ ಹಣ ಕಳುಹಿಸುವಂತೆ ಒತ್ತಡ ಹಾಕುತ್ತಿದ್ದ ಎಂದು ತಿಳಿದುಬಂದಿದೆ. ಹೀಗೆ ವಂಛಕನ ಒತ್ತಡಕ್ಕೆ ಮಣಿದು ಬರೋಬ್ಬರಿ 7.63 ಲಕ್ಷ ರೂ. ವರ್ಗಾಯಿಸಿದ ಬಳಿಕ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಇದೀಗ ವಂಚನೆ ಪ್ರಕರಣದ ಕುರಿತಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

11 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago