ಕಾರ್ಕಳ: ವ್ಯಕ್ತಿಯೊಬ್ಬರು ಆನ್ಲೈನ್ ವಂಚನೆಯಿಂದ 7.63 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವಂಚನೆಗೊಳಗಾದವರು ಕಾರ್ಕಳದ ಎಸ್ಬಿಐ ಮತ್ತು ಐಸಿಐಸಿಐ ಬ್ಯಾಂಕ್ಗಳಲ್ಲಿ ಎಸ್ಬಿ ಖಾತೆಗಳನ್ನು ಹೊಂದಿದ್ದಾರೆ.
ಫೆಲಿಕ್ಸ್ ಡಯಸ್ ಎಂಬ ಫೇಸ್ಬುಕ್ ಖಾತೆದಾರನು ಫೆಬ್ರವರಿ 4ರಂದು ಕಾರ್ಕಳ ಮೂಲದ ವ್ಯಕ್ತಿಗೆ ಪರಿಚಯವಾಗಿದ್ದ. ಅವನು ಯುರೋಪ್ನ ಸೈಪ್ರಸ್ನಲ್ಲಿ ಇದ್ದಾನೆ ಎಂದು ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇಗೆ ಉಡುಗೊರೆಯಾಗಿ ಸಂತ್ರಸ್ತರಿಗೆ ಪಾರ್ಸೆಲ್ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ. ವಂಚಕನು ಫೆಬ್ರವರಿ 13ರಂದು ಸಂತ್ರಸ್ತೆಯ ವಾಟ್ಸ್ ಆ್ಯಪ್ ಸಂಖ್ಯೆಗೆ ಪಾರ್ಸೆಲ್ಗಳ ಫೋಟೋವನ್ನು ಕಳುಹಿಸಿದ್ದ.
ಈ ನಡುವೆ, ದೆಹಲಿ ವಿಮಾನ ನಿಲ್ದಾಣದ ಸಿಬ್ಬಂದಿಯಂತೆ ಅಪರಿಚಿತ ವ್ಯಕ್ತಿ 9870189535 ಸಂಖ್ಯೆಯಿಂದ ದೂರವಾಣಿ ಕರೆ ಮಾಡಿ ಪಾರ್ಸೆಲ್ ಗ್ರೌಂಡ್ ಪಾಸ್ಗಾಗಿ ರೂ 47,000 ರೂ. ಪಾವತಿಸುವಂತೆ ಸೂಚಿಸಿದ್ದ. ಇದನ್ನು ನಂಬಿದ ವ್ಯಕ್ತಿ ವಂಚಕ ತಿಳಿಸಿದ ಖಾತೆಗೆ ಹಣ ವರ್ಗಾಯಿಸಿದ್ದರು. ಬಳಿಕ ವಂಚಕ ವಿವಿಧ ಕಾರಣಗಳನ್ನು ನೀಡಿ ಹಣ ಕಳುಹಿಸುವಂತೆ ಒತ್ತಡ ಹಾಕುತ್ತಿದ್ದ ಎಂದು ತಿಳಿದುಬಂದಿದೆ. ಹೀಗೆ ವಂಛಕನ ಒತ್ತಡಕ್ಕೆ ಮಣಿದು ಬರೋಬ್ಬರಿ 7.63 ಲಕ್ಷ ರೂ. ವರ್ಗಾಯಿಸಿದ ಬಳಿಕ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.
ಇದೀಗ ವಂಚನೆ ಪ್ರಕರಣದ ಕುರಿತಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…