Featured

ಕಾರ್ಕಳ:  ಆನ್‌ಲೈನ್ ವಂಚನೆ -7.63 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ – Vishwanews24

ಕಾರ್ಕಳ:  ಆನ್‌ಲೈನ್ ವಂಚನೆ -7.63 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ

ಕಾರ್ಕಳ: ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಯಿಂದ 7.63 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವಂಚನೆಗೊಳಗಾದವರು ಕಾರ್ಕಳದ ಎಸ್‌ಬಿಐ ಮತ್ತು ಐಸಿಐಸಿಐ ಬ್ಯಾಂಕ್‌ಗಳಲ್ಲಿ ಎಸ್‌ಬಿ ಖಾತೆಗಳನ್ನು ಹೊಂದಿದ್ದಾರೆ.

ಫೆಲಿಕ್ಸ್ ಡಯಸ್ ಎಂಬ ಫೇಸ್‌ಬುಕ್ ಖಾತೆದಾರನು ಫೆಬ್ರವರಿ 4ರಂದು ಕಾರ್ಕಳ ಮೂಲದ ವ್ಯಕ್ತಿಗೆ ಪರಿಚಯವಾಗಿದ್ದ. ಅವನು ಯುರೋಪ್‌ನ ಸೈಪ್ರಸ್‌ನಲ್ಲಿ ಇದ್ದಾನೆ ಎಂದು ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇಗೆ ಉಡುಗೊರೆಯಾಗಿ ಸಂತ್ರಸ್ತರಿಗೆ ಪಾರ್ಸೆಲ್‌ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ. ವಂಚಕನು ಫೆಬ್ರವರಿ 13ರಂದು ಸಂತ್ರಸ್ತೆಯ ವಾಟ್ಸ್ ಆ್ಯಪ್ ಸಂಖ್ಯೆಗೆ ಪಾರ್ಸೆಲ್‌ಗಳ ಫೋಟೋವನ್ನು ಕಳುಹಿಸಿದ್ದ.

ಈ ನಡುವೆ, ದೆಹಲಿ ವಿಮಾನ ನಿಲ್ದಾಣದ ಸಿಬ್ಬಂದಿಯಂತೆ ಅಪರಿಚಿತ ವ್ಯಕ್ತಿ 9870189535 ಸಂಖ್ಯೆಯಿಂದ ದೂರವಾಣಿ ಕರೆ ಮಾಡಿ ಪಾರ್ಸೆಲ್ ಗ್ರೌಂಡ್ ಪಾಸ್‌ಗಾಗಿ ರೂ 47,000 ರೂ. ಪಾವತಿಸುವಂತೆ ಸೂಚಿಸಿದ್ದ. ಇದನ್ನು ನಂಬಿದ ವ್ಯಕ್ತಿ ವಂಚಕ ತಿಳಿಸಿದ ಖಾತೆಗೆ ಹಣ ವರ್ಗಾಯಿಸಿದ್ದರು. ಬಳಿಕ ವಂಚಕ ವಿವಿಧ ಕಾರಣಗಳನ್ನು ನೀಡಿ ಹಣ ಕಳುಹಿಸುವಂತೆ ಒತ್ತಡ ಹಾಕುತ್ತಿದ್ದ ಎಂದು ತಿಳಿದುಬಂದಿದೆ. ಹೀಗೆ ವಂಛಕನ ಒತ್ತಡಕ್ಕೆ ಮಣಿದು ಬರೋಬ್ಬರಿ 7.63 ಲಕ್ಷ ರೂ. ವರ್ಗಾಯಿಸಿದ ಬಳಿಕ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಇದೀಗ ವಂಚನೆ ಪ್ರಕರಣದ ಕುರಿತಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

21 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

21 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

22 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

22 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

22 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

22 hours ago