ಕಾರ್ಕಳ: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ತಲೆ ಮರೆಸಿಕೊಂಡಿರುವ ಆರೋಪಿತರು.
ಪಶ್ಚಿಮಘಟ್ಟದಲ್ಲಿ ತಲೆಎತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರು ಸಕ್ರಿಯಾರಾಗಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಪೊಲೀಸರು ಈ ಹಿಂದೆ ಇವರ ಪತ್ತೆಯ ಮಾಹಿತಿದಾರರಿಗೆ ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ.
ನ್ಯಾಶನಲ್ ಇನ್ವೇಷ್ಟೀಗೆಶನ್ ಏಜೆನ್ಸಿ ಹೌಸ್ ನಂಬ್ರ 28/ 443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿರಿಸಲಾಗುವುದೆಂದು ತಿಳಿಸಲಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…