ಉಡುಪಿ: ಉದ್ಯಮಿ ದಿಲೀಪ್ ಎನ್ ಆರ್ ಅವರು ವಿಷವನ್ನು ಸೇವನೆ ಮಾಡಿ ತದನಂತರ ಲೈಸನ್ಸ್ ಇರುವ ಸರ್ವಿಸ್ ಪಿಸ್ತೂಲ್ ನಲ್ಲಿ ಎದೆಯ ಭಾಗಕ್ಕೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಉದ್ಯಮಿ ದಿಲೀಪ್ ಅವರ ಆತ್ಮಹತ್ಯೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಅನಯಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಮಂಗಳೂರಿನ ಉದ್ಯಮಿ ದಿಲೀಪ್ ಎನ್ ಆರ್ ಗೆ ಆರ್ಥಿಕ ನಷ್ಟವಾಗಿತ್ತು ಎಂಬ ಮಾಹಿತಿಯಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕುಟುಂಬದಿಂದ ಸಿಕ್ಕಿದೆ. ಆತ್ಮಹತ್ಯೆಗೆ ಮುನ್ನ ಕುಟುಂಬಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ರವಾನಿಸಿದ್ದಾರೆ. ಕುಟುಂಬಸ್ಥರು ರಾತ್ರಿಯೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಪೊಲೀಸರು ಕಾರನ್ನು ಹುಡುಕಿ ಪತ್ತೆ ಮಾಡಿದ್ದಾರೆ. ಕಾರ್ಕಳದ ನಿಟ್ಟೆ ಬಳಿ ಬೆಳಗಿನ ಜಾವ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ವಿಷದ ಬಾಟಲ್ ಮತ್ತು ಸರ್ವಿಸ್ ರಿವಾಲ್ವಾರ್ ಕಾರಿನೊಳಗೆ ಪತ್ತೆಯಾಗಿದೆ.ಅವರು ವಿಷವನ್ನು ಸೇವಿಸಿ ಬಳಿಕ ಸರ್ವಿಸ್ ಪಿಸ್ತೂಲ್ ನಲ್ಲಿ ಶೂಟ್ ಮಾಡಿಕೊಂಡಿರುತ್ತಾರೆ. ಈ ಸಂಬಂಧ ಕುಟುಂಬಿಕರು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ನಂತರ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದು ಹೇಳಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]