ಕಾರ್ಕಳ: ಮಾಧ್ಯಮದ ಎದುರು ಹೇಳಲು ಸಾಧ್ಯವಿಲ್ಲ. ನಮ್ಮ ಅಭಿಪ್ರಾಯ ಆಲಿಸಲು ಪಕ್ಷದ ವರಿಷ್ಠರ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಕಾರ್ಕಳ ಶಾಸಕ, ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.
ತಮ್ಮ ಅಸಮಾಧಾನ ಮತ್ತು ಆಗ್ರಹವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಮುಖ್ಯಮಂತ್ರಿ ಬದಲಾಣೆ ಕುರಿತಂತೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿಯ ಬಹಳಷ್ಟು ಸಚಿವರು, ನಾಯಕರು ಸಿಎಂ ಬಿಎಸ್ ವೈ ಗೆ ಬೆಂಬಲವಾಗಿ ಮಾತನಾಡುತ್ತಿದ್ದಾರೆ. ಈ ಮಧ್ಯೆ ಸುನೀಲ್ ಕುಮಾರ್ ‘ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ’ ಎಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…