ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ, ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ, ಆ ಹೆಚ್ಚುವರಿ ಹಾಲಿಗೆ ಎರಡು ರೂ ಹೆಚ್ಚುವರಿಯಾಗಿ ಪಡೆಯಲಾಗುತ್ತದೆಯೇ ವಿನಃ ಬೆಲೆ ಏರಿಸಿಲ್ಲ ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ ವಿನಹ ಯಾರಿಗೂ ಹೊರೆಯಾಗಿಲ್ಲ, ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ ಆದರೂ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನ ಎಂದು ಹೇಳಿದ್ದಾರೆ.
ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನ ಮಂತ್ರಿಗಳ ತವರು ಗುಜರಾತಿನಲ್ಲಿ ಅತೀ ಹೆಚ್ಚಾಗಿದೆ ಈ ಬಗ್ಗೆ ಬಿಜೆಪಿ ಪ್ರತಿಭಟನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಆಹಾರ ಕಿಟ್ಟ್ ನೀಡದೆ ಫಲಾನುಭವಿಗಳ ಪಟ್ಟಿ ಮಾಡುವುದು, ಅನುದಾನ ಬಿಡುಗಡೆಯಾಗದೆ ಗುದ್ದಲಿ ಪೂಜೆ ಮಾಡುವುದು, ಕಾಮಗಾರಿ ಕಳಪೆಯಾದರೂ ಬಿಲ್ಲ್ ಪಾವತಿಸುವುದು. ಇದು ನಮ್ಮ ಶಾಸಕರ ವಿಶೇಷತೆ, ಈ ಬಾರಿ ಹಾಲಿಲ್ಲದ ಚಾಹ ಮಾಡುವುದು ಅದೇ ಪಟ್ಟಿಗೆ ಸೇರಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…