ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ, ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ, ಆ ಹೆಚ್ಚುವರಿ ಹಾಲಿಗೆ ಎರಡು ರೂ ಹೆಚ್ಚುವರಿಯಾಗಿ ಪಡೆಯಲಾಗುತ್ತದೆಯೇ ವಿನಃ ಬೆಲೆ ಏರಿಸಿಲ್ಲ ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ ವಿನಹ ಯಾರಿಗೂ ಹೊರೆಯಾಗಿಲ್ಲ, ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ ಆದರೂ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನ ಎಂದು ಹೇಳಿದ್ದಾರೆ.
ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನ ಮಂತ್ರಿಗಳ ತವರು ಗುಜರಾತಿನಲ್ಲಿ ಅತೀ ಹೆಚ್ಚಾಗಿದೆ ಈ ಬಗ್ಗೆ ಬಿಜೆಪಿ ಪ್ರತಿಭಟನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಆಹಾರ ಕಿಟ್ಟ್ ನೀಡದೆ ಫಲಾನುಭವಿಗಳ ಪಟ್ಟಿ ಮಾಡುವುದು, ಅನುದಾನ ಬಿಡುಗಡೆಯಾಗದೆ ಗುದ್ದಲಿ ಪೂಜೆ ಮಾಡುವುದು, ಕಾಮಗಾರಿ ಕಳಪೆಯಾದರೂ ಬಿಲ್ಲ್ ಪಾವತಿಸುವುದು. ಇದು ನಮ್ಮ ಶಾಸಕರ ವಿಶೇಷತೆ, ಈ ಬಾರಿ ಹಾಲಿಲ್ಲದ ಚಾಹ ಮಾಡುವುದು ಅದೇ ಪಟ್ಟಿಗೆ ಸೇರಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…