Featured

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ

ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಯುವಜನ ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರವನ್ನು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂಬಳ ತುಳುನಾಡಿನ ಸಂಸ್ಕೃತಿಯ ಭಾಗ. ತುಳುನಾಡಿನ ಪ್ರಕೃತಿ ಕೂಡ ಕಂಬಳದ ಅಭಿವೃದ್ಧಿಗೆ ಪೂರಕವಾಗಿದ್ದು, ಪ್ರಕೃತಿಯೊಂದಿಗೆ ಸಂಸ್ಕೃತಿಯ ಕೂಡುವಿಕೆ ನಮ್ಮ ನಾಡಿನ ಸಂಸ್ಕೃತಿಯ ಅಭೂತಪೂರ್ವ ಬೆಳವಣಿಗೆಗೆ ಪೂರಕವಾಗಲಿದೆ.

ಇದನ್ನೂ ಓದಿ :

ರಾಜ್ಯದದ್ಯಾಂತ ಕಂಬಳ ಪ್ರಸಿದ್ಧಿ ಪಡೆಯುತ್ತಿದ್ದು, ಕೆಲ ವರ್ಷಗಳ ಹಿಂದೆ ಕಂಬಳದ ಕೋಣಗಳ ಸಂಖ್ಯೆ ಬಹಳ ಕಡಿಮೆ ಇದ್ದು ಇತ್ತೀಚಿನ ದಿನಗಳಲ್ಲಿ ಕೋಣಗಳ ಸಂಖ್ಯೆ ಕೂಡಾ ಗಣನೀಯವಾಗಿ ಹೆಚ್ಚಿದೆ. ಕಂಬಳ ಓಟಗಾರರ ಸಂಖ್ಯೆ ಕೂಡಾ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಕಂಬಳ ಓಟಗಾರರ ಆಯ್ಕೆ ಮಾಡುವ ಮೂಲಕ ಯುವಜನತೆ ಕಂಬಳದ ಕಡೆ ಆಕರ್ಷಸುವಂತ ತರಬೇತಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಉದ್ಯಮಿ, ಕಂಬಳ ಸಮಿತಿ ಮಹಾಪೋಷಕ ಮಿಯ್ಯಾರು ಮಂಜೆಮನೆ ಆನಂದ ಎಂ ಶೆಟ್ಟಿ ರಾಜ್ಯ ಕಂಬಳ ಸಮಿತಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಂಬಳ ಅಸೋಸಿಯೇಷನ್ (ರಿ )ಅಧ್ಯಕ್ಷ ಚಂದ್ರಹಾಸ ಸಾಧು ಸನಿಲ್ ವಹಿಸಿದ್ದರು.

ಇದನ್ನೂ ಓದಿ :

ಸುಮಾರು 120 ಮಂದಿ ಕಂಬಳ ಓಟಗಾರರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸೆ.16ರಿಂದ 26ರವರೆಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ.

ಕಂಬಳ ಶಿಬಿರಾರ್ಥಿಗಳಿಗೆ ನಂದಳಿಕೆ ಶ್ರೀಕಾಂತ್ ಭಟ್ ಸಮವಸ್ತ್ರ ಹಾಗೂ ಕಿಟ್ ವಿತರಿಸಿದರು.

ತರಬೇತಿ ಶಿಬಿರದ ಸಂರಕ್ಷಕರಾದ, ಎ ಪಿ ಎಂ ಸಿ ಹಾಗೂ ಕುಕ್ಕುಂದೂರು ಪಂಚಾಯತ್ ಮಾಜಿ ಅಧ್ಯಕ್ಷ ಅಂಥೋನಿ ಡಿಸೋಜ ನಕ್ರೆ, ರಾಜ್ಯ ಕಂಬಳ ಸಮಿತಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಹೊಸ್ಮಾರು ಸುರೇಶ ಶೆಟ್ಟಿ, ದಿವಾಕರ್ ಜೈನ್, ಜಿಲ್ಲಾ ಕಂಬಳ ಸಮಿತಿ ಕೋಶಾಧಿಕಾರಿ ಸಂದೀಪ್ ಶೆಟ್ಟಿ, ಡಾ ಯೋಗೀಶ್ ಆಚಾರ್ಯ, ಉದಯ ಶೆಟ್ಟಿ ಕಾಂತಾವರ, ಶಾಂತರಾಮ್ ಶೆಟ್ಟಿ, ಪ್ರಕಾಶ್ ಬಲಿಪ, ಅಶೋಕ್ ಕುಮಾರ್ ಜೈನ್ ಈದು, ಮಿಯ್ಯಾರು ದೆಂದಬೆಟ್ಟು ಜೀವಂದರ್ ಜೈನ್, ಜನಾರ್ಧನ್ ನಾಯಕ್, ಶೈಲೇಶ್ ಅರಿಗ ಹಿನಪ್ಪಾಡಿ, ದಿವಾಕರ್ ಜೈನ್, ಕಿರಣ್ ಬಲಿಪ, ವಿಶ್ವನಾಥ್ ಶೆಟ್ಟಿ, ತರಬೇತುದಾರರಾದ ಶಾಂತರಾಮ್, ವಸಂತ್ ಜೋಗಿ, ದಿನೇಶ್ ಕಕ್ಕೆಪದವು, ವಿದ್ಯಾದರ್ ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…

5 minutes ago

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ…

20 minutes ago

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು – vishwanews24

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ…

35 minutes ago

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ – vishwanews24

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ ಮಂಗಳೂರು : ಬಿಜೆಪಿಗೆ…

44 minutes ago

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – vishwanews24

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು : ಗಣೇಶ ಚತುರ್ಥಿದಂದು…

51 minutes ago

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ ಉಡುಪಿ:…

2 hours ago