ಉಡುಪಿ: ಕಾರ್ಕಳದಲ್ಲಿ ಕಾಂಗ್ರೆಸ್ ಭಿನ್ನಮತ ಭುಗಿಲೆದ್ದಿದೆ. ಕಾರ್ಕಳದಿಂದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರು ಸಿಡಿದೆದ್ದಿದ್ದಾರೆ.
ಎಐಸಿಸಿ ಪಟ್ಟಿಯಲ್ಲಿ ಕಾರ್ಕಳದಿಂದ ಗೋಪಾಲ ಭಂಡಾರಿಗೆ ಟಿಕೆಟ್ ಘೋಷಣೆಯಾಗಿದೆ. ಮುನಿಯಾಲು ಉದಯ ಶೆಟ್ಟಿ ಬೆಂಬಲಿಗರು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಕಾರ್ಕಳದ ತಾಲೂಕು ಕಚೇರಿಯಲ್ಲಿ ಶೆಟ್ಟಿ ಬೆಂಬಲಿಗರು ಮೊಯ್ಲಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದೆ ತೀರ್ಮಾನ ಮಾಡುವುದಾಗಿ ಉದಯಕುಮಾರ್ ಶೆಟ್ಟಿ ಮುನಿಯಾಲು ವಿಶ್ವ ನ್ಯೂಸ್24 ಜೊತೆ ಮಾತನಾಡುತ್ತಾ ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವಂತೆ ಶೆಟ್ಟಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಮೊಯ್ಲಿ ಪುತ್ರ ಹರ್ಷ ಮೊಯ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಮೊಯ್ಲಿ ತನ್ನ ಪವರ್ ಬಳಸಿ ಉದಯ ಶೆಟ್ಟಿಗೆ ಟಿಕೆಟ್ ತಪ್ಪಿಸಿ ತಮ್ಮ ಶಿಷ್ಯ ಗೋಪಾಲ ಭಂಡಾರಿಗೆ ಟಿಕೆಟ್ ಕೊಡಿಸಿದ್ದಾರೆ ಎಂಬೂದು ಸದ್ಯದ ಆರೋಪವಾಗಿದೆ.
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…