Featured

ಕಾರ್ಕಳ:  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24

ಕಾರ್ಕಳ:  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ

ಕಾರ್ಕಳ :ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮಾರ್ಚ್ 14ರಂದು ಗ್ರಾಮ ಮಟ್ಟದಿಂದ ಪುರಸಭೆ ಹಾಗೂ ನಗರ ಪಾಲಿಕೆ ಮಟ್ಟದವರೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ತಪ್ಪು ನೀತಿಗಳ ಪರಿಣಾಮ ಕೆಂಪುಕಲ್ಲು ಮತ್ತು ಮರಳು ಪೂರೈಕೆ ಆಗದೇ ಬಡಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಪರಿಣಾಮ ಕಟ್ಟಡ ಕಾರ್ಮಿಕರಿಗೆ ಉದ್ಯೋಗದ ಕೊರತೆ ಉಂಟಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಆರೋಪಿಸಿದರು.

ಸ್ಟಾಂಪ್ ಡ್ಯೂಟಿ ಹೆಚ್ಚಳ ಹಾಗೂ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಹಣವನ್ನು ದೋಚಲಾಗುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಒಂದು ಹೊಸ ರೇಷನ್ ಕಾರ್ಡ್ ಕೂಡ ನೀಡಿಲ್ಲ. ಬದಲಾಗಿ ಸಾವಿರಾರು ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಬಡವರ ಅನ್ನಕ್ಕೆ ಕಲ್ಲು ಹಾಕಿದಂತಾಗಿದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ:👇

ಡೀಮ್ಡ್ ಅರಣ್ಯವನ್ನು ರದ್ದುಪಡಿಸಿದ ಬಳಿಕವೂ ಬಡವರಿಗೆ ನಿವೇಶನ ನೀಡದೇ ಅರ್ಜಿದಾರರ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯಾವುದೇ ಪ್ರಾಮುಖ್ಯತೆ ನೀಡದೇ, ಅಗತ್ಯ ಅನುದಾನ ಒದಗಿಸದಿರುವುದು ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದರು.

ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಗಳಲ್ಲಿ ಗೊಂದಲ ಉಂಟಾಗಿದೆ. ಅಘೋಷಿತ ಲೋಡ್ ಶೆಡ್ಡಿಂಗ್ ಹಾಗೂ ನಿರಂತರ ವಿದ್ಯುತ್ ದರ ಏರಿಕೆಯಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಜೊತೆಗೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಗ್ರಾಮ ಪಂಚಾಯತ್‌ನಿಂದ ವಿಧಾನಸೌಧದವರೆಗೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅವರು ದೂರಿದರು.

ಇದನ್ನೂ ಓದಿ:👇

 

ಜವಳಿ ಪಾರ್ಕ್ ಕುರಿತು ಮಾತನಾಡಿದ ಅವರು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗಿದ್ದರೂ ಎರಡು ಬಾರಿ ಟೆಂಡರ್ ಕರೆಯಲಾಗಿದ್ದರೂ ಟೆಂಡರ್‌ದಾರರು ಮುಂದೆ ಬಂದಿಲ್ಲ. ಈ ಕುರಿತು ಶಾಸಕ ಸುನೀಲ್ ಕುಮಾರ್ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ರಾಜ್ಯ ಸರ್ಕಾರವೇ ನೇರವಾಗಿ ಜವಳಿ ಪಾರ್ಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದು ತಿಳಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago