ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24
ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ
ಕಾರ್ಕಳ: ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಕ್ರಾಸ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ನವೀನ್ ಚಂದ್ರ ಮೂಲ್ಯ (45) ಮೃತಪಟ್ಟ ಸವಾರ. ಅವರ ಮಗಳು ಪ್ರೇರಣಾ ಮೂಲ್ಯ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಟ್ಟೆ ಸಮೀಪದ ಬಜಕಳ ನಿವಾಸಿ ನವೀನ್ ಚಂದ್ರ ಅವರು ತನ್ನ ಮಗಳು ಪ್ರೇರಣಾ ಅವರನ್ನು ಸಿಇಟಿ ಪರೀಕ್ಷೆ ಬರೆಯಿಸಿ ಬೈಕ್ನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು.
ಇದನ್ನೂ ಓದಿ:
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು ಪಡಿಸಿದ ಆರ್ಬಿಐ – vishwanews24
ಈ ವೇಳೆ ಕಾರ್ಕಳದಿಂದ ನಿಟ್ಟೆ ಕಡೆಗೆ ಅತಿವೇಗವಾಗಿ ಬಂದ ಕಾರು ಇವರ ಬೈಕ್ಗೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿತ್ತು. ತತ್ಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ನವೀನ್ ಚಂದ್ರ ಅವರು ಮೃತಪಟ್ಟಿದ್ದಾರೆ. ಕಾರು ಚಾಲಕನ ಬೇಜವಾಬ್ದಾರಿಯ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ದೂರಿದ್ದಾರೆ.
