ಕಾರ್ಕಳ: ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಉಡುಪಿಯ ಟೂರಿಸ್ಟ್ ವಾಹನವೊಂದು (ಟಿಟಿ) ಹೊತ್ತಿ ಉರಿದ ಘಟನೆ ಶನಿವಾರ (ಡಿ.14) ಸಂಭವಿಸಿದೆ.
ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ.
ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.
ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…