ಕಾರ್ಕಳ: ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಉಡುಪಿಯ ಟೂರಿಸ್ಟ್ ವಾಹನವೊಂದು (ಟಿಟಿ) ಹೊತ್ತಿ ಉರಿದ ಘಟನೆ ಶನಿವಾರ (ಡಿ.14) ಸಂಭವಿಸಿದೆ.
ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ.
ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.
ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…