ಮುಂಡ್ಕೂರು : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.
ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ: ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…