ಮುಂಡ್ಕೂರು : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.
ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ: ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…