Featured

ಕಾರ್ಕಳ : ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ : ನಮ್ಮಲ್ಲಿ ಗಾಡಿ ಇಲ್ಲ ಎಂದು ಅಗ್ನಿಶಾಮಕ ದಳದಿಂದ ನಿರ್ಲಕ್ಷ್ಯ – Vishwanews24

ಕಾರ್ಕಳ : ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ : ನಮ್ಮಲ್ಲಿ ಗಾಡಿ ಇಲ್ಲ ಎಂದು ಅಗ್ನಿಶಾಮಕ ದಳದಿಂದ ನಿರ್ಲಕ್ಷ್ಯ

ಮುಂಡ್ಕೂರು : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‌ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.

ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ: ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago