ಮುಂಡ್ಕೂರು : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.
ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ: ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…