Featured

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು -vishwanews24

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ಸೇರಿದಂತೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣಾ ವ್ಯಾಪ್ತಿಯ ಶಿರ್ಲಾಲು ಗ್ರಾಮದ ಮದೆಲ್ಕಡಿ ಸಮೀಪ ಉಬ್ರೇಲುಗುಂಡಿ ಎಂಬಲ್ಲಿ ಮೇ 19ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಬಜಗೋಳಿ ಸಮೀಪದ ಕೆರುವಾಶೆ ನಿವಾಸಿ ಹರೀಶ್ ಪೂಜಾರಿ ಹಾಗೂ ಹರಿಣಿ ದಂಪತಿ ಪುತ್ರ ರಿತೇಶ್(18) ಮತ್ತು ಹರಿಣಿ ಅವರ ಅಣ್ಣ ಶಿರ್ಲಾಲು ನಿವಾಸಿ ಹರೀಶ್ ಪುಜಾರಿ(48) ಎಂದು ಗುರುತಿಸಲಾಗಿದೆ. ಹರಿಣಿ, ತನ್ನ ಮಕ್ಕಳಿಗೆ ಶಾಲೆ ರಜೆಯ ಹಿನ್ನೆಲೆಯಲ್ಲಿ ಶಿರ್ಲಾಲುವಿನಲ್ಲಿರುವ ತನ್ನ ತವರು ಮನೆಗೆ ಬಂದಿದ್ದರು.

ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಹರಿಣಿ, ರಿತೇಶ್ ಹಾಗೂ ಹರೀಶ್ ಮನೆ ಸಮೀಪದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಸರಿಯಾಗಿ ಈಜು ಬಾರದ ರಿತೇಶ್ ಮೀನಿನ ಬಲೆ ಹಿಡಿದುಕೊಂಡು ಕೆರೆಯ ಮಧ್ಯ ಭಾಗಕ್ಕೆ ಹೋದನು. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಬಂದಿರುವುದರಿಂದ ಕೆರೆಯಲ್ಲಿ ನೀರು ಹೆಚ್ಚಾಗಿದ್ದು, ಇದರಿಂದ ಕೆರೆಯಲ್ಲಿ ಬಲೆ ಹಾಕುತ್ತಿದ್ದ ರಿತೇಶ್ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾನೆ ಎನ್ನಲಾಗಿದೆ.

ಇದನ್ನು ಕಂಡ ಹರೀಶ್ ಪೂಜಾರಿ, ರಿತೇಶ್‌ನನ್ನು ರಕ್ಷಿಸಲು ನೀರಿಗೆ ಇಳಿದರು. ಮಳೆಯಿಂದ ಕೆರೆಯಲ್ಲಿ ನೀರು ಹೆಚ್ಚು ಇದ್ದುದರಿಂದ ಇಬ್ಬರೂ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿ ಹರಿಣಿ ಅವರ ಕಣ್ಣೇದುರೇ ಮಗ ಮತ್ತು ತಮ್ಮ ಪ್ರಾಣ ಕಳೆದುಕೊಂಡರು. ಕೂಡಲೇ ಮಾಹಿತಿ ತಿಳಿದು ಆಗಮಿಸಿದ ಸ್ಥಳೀಯರು ಮೃತದೇಹವನ್ನು ಮೇಲಕ್ಕೆ ಎತ್ತಿದರು.

ಕಾರ್ಕಳದ ಕ್ರಿಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆತ ಉತ್ತೀರ್ಣನಾಗಿದ್ದನು. ಹರೀಶ್ ಪೂಜಾರಿಯವರು ಸ್ಥಳೀಯವಾಗಿ ಕೂಲಿ ಕೆಲಸ ಮಾಡಿ ಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago