Featured

ಕಾರ್ಕಳ: ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ – vishwanews24

ಕಾರ್ಕಳ: ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

ಕಾರ್ಕಳ : ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಅಸಾಧ್ಯವಾಗಿ ಮಾನಸಿಕ ವೇದನೆಯಿಂದ ಕೊರಗುತ್ತಿದ್ದ ಮಹಿಳೆಯೊಬ್ಬಳು ಬದುಕು ಅಂತ್ಯ ಹೇಳಿದ ಘಟನೆ ಈದು ಗ್ರಾಮದಲ್ಲಿ ನಡೆದಿದೆ.

ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವಳು. ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. 2022ರಲ್ಲಿ ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಸನ್ನಾ 10 ತಿಂಗಳ ಹೆಣ್ಣು ಮಗು ಇದೆ.

ಹೆರಿಗೆಯಾದ ಬಳಿಕ ಪ್ರಸನ್ನಾಳ ಜೀವನಲ್ಲಿ ಭಾರೀ ಬದಲಾವಣೆಗಳು ಕಂಡುಬಂದ ಹಿನ್ನಲ್ಲೆಯಲ್ಲಿ ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆಂದು ತಿಳಿದುಬಂದಿದೆ. ಪ್ರಸನ್ನಾ ಅವರು ತನ್ನ ತಾಯಿಗೆ ಕರೆಮಾಡಿ ನನಗೆ ಗಂಡನ ಮನೆಯವರು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುವುದಿಲ್ಲ ಎಂದು ಹೇಳುತ್ತಿದ್ದರು.

ತಾನು ಕಷ್ಟಪಟ್ಟು ಓದಿ ಸ್ವಾವಲಂಬಿ ಬದುಕಿನ ಕನಸ್ಸು ಕಂಡಿದ್ದ ಆಕೆ ತನಗೆ ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದರು. ನ.6 ರಂದು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago