ಕಾರ್ಕಳ: ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಕಾರ್ಮಿಕ ದಲಿತ ಯುವಕ ಬಾಗಲಕೋಟೆಯ ವೆಂಕಟೇಶ್ (32) ಸಾವಿಗೆ ಸ್ಟೋಟಕ ಕಾರಣವೆಂಬ ಮಹತ್ವದ ಅಂಶ ಪೊಲೀಸ್ ಇಲಾಖೆ ತನಿಖೆಯಲ್ಲಿ ದೃಢಪಡಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರೆ ಮಾಲಕ ಹಾಗೂ ಸ್ಫೋಟ ನಡೆಸಿದ ಬಾಲಾಜಿ ನಾಮಾಂಕಿತ ಸಂಸ್ಥೆಯ ಮೇಲೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕ್ವಾರೆಯಲ್ಲಿ ದುಡಿಯುತ್ತಿದ್ದ ಸಂದರ್ಭದಲ್ಲಿ ಸ್ಪೋಟಕ ಬಳಸಿ ಕರಿಕಲ್ಲನ್ನು ಸ್ಪೋಟಿಸಿದಾಗ ಭಾರೀ ಗಾತ್ರದ ಕರಿಕಲ್ಲು ವೆಂಕಟೇಶ್ ತಲೆ ಭಾಗಕ್ಕೆ ಬಂದೆರಗಿ ಘಟನಾ ಸ್ಥಳದಲಗಲಿಯೇ ಕುಸಿದು ಬಿದ್ದರು. ಪರಿಣಾಮವಾಗಿ ರಕ್ತಸ್ರಾವದೊಂದಿಗೆ ಮಣಿಪಾಲ ಆಸ್ಪತ್ರೆ ಗೆ ದಾಖಲಿಸಲಾಗಿತ್ತಾದರೂ ಅದಾಗಲೇ ವೆಂಕಟೇಶ್ ಜೀವತೆತ್ತದರು.
ಇನ್ನು ಕರಿಕಲ್ಲಿನ ಕ್ವಾರೆಯಲ್ಲಿ ಘಟನೆ ಸಂಭವಿಸಿದ ದಿನದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಡುಪಿ ಜಿಲ್ಲೆಯಲ್ಲಿದ್ದು, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು.
ಅದೇ ದಿನದಂದು ಕಾರ್ಕಳದಲ್ಲಿ ಸಂಭವಿಸಿದ ಘಟನೆಯಿಂದಾಗಿ ಯುವಕನೊಬ್ಬ ಮೃತ ಪಟ್ಟಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ತಮಡುಗಟ್ಟಿದ್ದು, ಸ್ಪೋಟಕದ ತೀವ್ರತೆಯನ್ನು ಪೊಲೀಸ್ ಇಲಾಖೆ ಅಂದಾಜಿದರು. ಕ್ವಾರೆ ಮಾಲಕರು ಹೇಳಿದ ಕಡ್ಲೆಪುರಿ ಕಥೆಗೆ ಇತಿಶ್ರೀ ಹಾಕಿದ ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿರುವುದಕ್ಕೆ ನಾಗರಿಕ ಸಮಾಜದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿವೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…