Featured

ಕಾರ್ಕಳ: ಗಾಂಜಾ ಮಾರಾಟಕ್ಕೆ ಯತ್ನ ; ವ್ಯಕ್ತಿಯ ಬಂಧನ – vishwanews24

ಕಾರ್ಕಳ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ ; ವ್ಯಕ್ತಿಯ ಬಂಧನ

ಕಾರ್ಕಳ:ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೂವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38) ಪ್ರಕರಣದ ಆರೋಪಿ.ಗಾಂಜಾ ವ್ಯಸನಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಅಂಗ ಶೋಧನೆ ನಡೆಸಿದಾಗ ಆತನ ವಶದಲ್ಲಿದ್ದ ಒಟ್ಟು 900ಗ್ರಾಂ ತೂಕದ ಗಾಂಜಾವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಆರೋಪಿಯ ವಿರುದ್ಧ ಚಿಕ್ಕಮಂಗಳೂರು ಜಿಲ್ಲೆಯಲ್ಲಿ 3 ಪ್ರಕರಣ ದಾಖಲಾಗಿದ್ದು ಅಲ್ಲದೇ ಬೆಳ್ತಂಗಡಿ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿ ಇರುತ್ತದೆ ಎಂಬ ಮಾಹಿತಿ ಲಭಿಸಿದೆ.

ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯಿಂದ ಸ್ವಾಧೀನ ಪಡಿಸಕೊಂಡ ಒಟ್ಟು 900ಗ್ರಾಂ ಗಾಂಜಾದ ಅಂದಾಜು ಮೌಲ್ಯ ರೂ. 22000 ಆಗಿರುತ್ತದೆ.

ಈ ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಂತೆ, ಡಿಸಿಪಿ ಸಿದ್ದಾರ್ಥ ಗೊಯಲ್ (ಕಾ&ಸು), ರವಿಶಂಕರ್ ಡಿಸಿಪಿ (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿಜಿ ರವರ ನೇತೃತ್ವದ ತಂಡ ಸಿದ್ದಪ್ಪ ನರನೂರ ಪೊಲೀಸ್ ಉಪ ನಿರೀಕ್ಷಕರು, ಎ ಎಸ್ ಐ ಪ್ರಶಾಂತ್, ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಕ್ಯಾಲ್ ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್ ಮತ್ತು ರಾಜೇಶ್, ನಾಗರಾಜ ಲಮಾಣಿ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Vishwa News 24

Recent Posts

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

27 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

39 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

44 minutes ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

1 hour ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

1 hour ago