ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ – Vishwanews24

Featured, ಉಡುಪಿ

ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ

ಕಾರ್ಕಳ,: ಪ್ರಗತಿಪರ ಕೃಷಿಕರೋರ್ವರು ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ದುರ್ಗ ಗ್ರಾಮದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರ್ಕಳ ಪ್ರಗತಿಪರ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಅವರು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದಾಗ ಭಾಸ್ಕರ ಹೆಗ್ಡೆಯವರು ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಕೃತ್ಯ ಎಸಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ, ವೃತ್ತ ನಿರೀಕ್ಷಕ ಸಂಪತ್, ಡಿವೈಎಸ್ಪಿ ವಿನಯಪ್ರಸಾದ್ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮೃತರು ಸಾವಯವ ಕೃಷಿಕರಾಗಿ ಗಮನ ಸೆಳೆದಿದ್ದರು. ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಮಾಡಿದ್ದರು. ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ : ತಂದೆ ಸಾವು, ಮಗ ಗಂಭೀರ – Vishwanews24

 

Leave a Reply