ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು – vishwanews24

Featured, ಉಡುಪಿ

ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ  : ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ.

ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನ ರಸ್ತೆ ಬಲಭಾಗಕ್ಕೆ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಹುಬ್ಬಳ್ಳಿಯ ಹಾನಗಲ್ ಗೆ ಸಾಗುತ್ತಿದ್ದ ವಾಹನದ ಚಾಲಕನಿಗೆ ಮುಂಜಾನೆ ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ , ನಾವು ಗೆಲ್ಲೋದಷ್ಟೇ  ಮುಖ್ಯ : ಡಾ.ಜಿ‌.ಪರಮೇಶ್ವರ್ – vishwanews24

ಗಾಯಾಳುವಿಗೆ ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ 108 ಸಿಬ್ಬಂದಿಗಳಾದ ಸ್ಟಾಫ್ ನರ್ಸ್ ದೇವಿಕಾ ಹಾಗೂ ಪೈಲಟ್ ಕಿಶೋರ್ ಕುಮಾರ್ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಯುವತಿ ನಾಪತ್ತೆ – vishwanews24

Leave a Reply