ಕಾರ್ಕಳ : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರನ್ನು ಬೋಳ ಗ್ರಾಮದ ರಸ್ತೆಗೆ ಅಳವಡಿಸಿದ ದೇಶದ್ರೋಹಿಯನ್ನು ತಕ್ಷಣವೇ ಬಂಧಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆಗ್ರಹಿಸಿದರು.
ಮಂಗಳವಾರ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಬೋಳದಲ್ಲಿ ಗೋಡ್ಸೆ ನಾಮಫಲಕ ಅಳವಡಿಸಿದ ಕುರಿತು ತನಿಖೆ ನಡೆದು ಸತ್ಯಾಂಶ ಹೊರಬಂದು ತಪ್ಪಿತಸ್ಥನಿಗೆ ಸರಿಯಾದ ಶಿಕ್ಷೆಯಾಗಬೇಕೆಂದರು.
ಗೋಡ್ಸೆ ಹೆಸರು ರಸ್ತೆಗಿಡುವ ಮೂಲಕ ರಾಷ್ಟ್ರಪಿತ ಗಾಂಧಿಗೆ ಬಹಳ ದೊಡ್ಡ ಅಪಮಾನ ಮಾಡಲಾಗಿದೆ. ಇದನ್ನು ಪಕ್ಷಭೇದ ಮರೆತು ಪ್ರತಿಯೊಬ್ಬರೂ ಖಂಡಿಸಲೇಬೇಕು. ಸಚಿವ ಸುನೀಲ್ ಕುಮಾರ್ ಅವರು ಇದು ಗ್ರಾಮ ಪಂಚಾಯತ್ನಿಂದಾದ ಕೆಲಸವಲ್ಲ ಎಂದು ತಿಳಿಸಿರುತ್ತಾರೆ. ಯಾರಿಂದವೇ ಆಗಲಿ, ಅಂತವರ ವಿರುದ್ಧ ದೇಶದ್ರೋಹದ ಕೇಸ್ ಹಾಕಿ ಶಿಕ್ಷೆಗೆ ಒಳಪಡಿಸಬೇಕಿದೆ. ಬೋರ್ಡ್ ಬರೆದವರ ಬಗ್ಗೆಯೂ ತನಿಖೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸರು, ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಮುಂದಾಗಬೇಕು. ತಪ್ಪಿತಸ್ಥನ ಬಂಧನವಾಗದೇ ಇದ್ದಲ್ಲಿ ಕ್ಷೇತ್ರದ ಶಾಸಕ, ಸಚಿವ ಸುನೀಲ್ ಕುಮಾರ್ ಅವರು ಮಂತ್ರಿಸ್ಥಾನದಲ್ಲಿರಲು ಅನರ್ಹರು ಎಂದು ಮಮತಾ ಗಟ್ಟಿ ಹೇಳಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ ರಾವ್, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಜನಿ ಹೆಬ್ಬಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ, ಪುರಸಭಾ ಸದಸ್ಯ ಸೋಮನಾಥ ನಾಯ್ಕ್, ಕಾಂಗ್ರೆಸ್ ಮುಖಂಡರಾದ ರವಿಶಂಕರ್ ಶೇರಿಗಾರ್, ಸುಧಾಕರ್ ಕೋಟ್ಯಾನ್, ಪ್ರಭಾಕರ್ ಬಂಗೇರಾ, ಜಾರ್ಜ್ ಕ್ಯಾಸ್ತೋಲಿನೋ, ಶುಭದ ಆಳ್ವಾ, ಮಲ್ಲಿಕಾ ಪಕ್ಕಲ, ಥೋಮಸ್ ಮಸ್ಕರೇನ್ಹಸ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…