ಕಾರ್ಕಳ : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರನ್ನು ಬೋಳ ಗ್ರಾಮದ ರಸ್ತೆಗೆ ಅಳವಡಿಸಿದ ದೇಶದ್ರೋಹಿಯನ್ನು ತಕ್ಷಣವೇ ಬಂಧಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆಗ್ರಹಿಸಿದರು.
ಮಂಗಳವಾರ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಬೋಳದಲ್ಲಿ ಗೋಡ್ಸೆ ನಾಮಫಲಕ ಅಳವಡಿಸಿದ ಕುರಿತು ತನಿಖೆ ನಡೆದು ಸತ್ಯಾಂಶ ಹೊರಬಂದು ತಪ್ಪಿತಸ್ಥನಿಗೆ ಸರಿಯಾದ ಶಿಕ್ಷೆಯಾಗಬೇಕೆಂದರು.
ಗೋಡ್ಸೆ ಹೆಸರು ರಸ್ತೆಗಿಡುವ ಮೂಲಕ ರಾಷ್ಟ್ರಪಿತ ಗಾಂಧಿಗೆ ಬಹಳ ದೊಡ್ಡ ಅಪಮಾನ ಮಾಡಲಾಗಿದೆ. ಇದನ್ನು ಪಕ್ಷಭೇದ ಮರೆತು ಪ್ರತಿಯೊಬ್ಬರೂ ಖಂಡಿಸಲೇಬೇಕು. ಸಚಿವ ಸುನೀಲ್ ಕುಮಾರ್ ಅವರು ಇದು ಗ್ರಾಮ ಪಂಚಾಯತ್ನಿಂದಾದ ಕೆಲಸವಲ್ಲ ಎಂದು ತಿಳಿಸಿರುತ್ತಾರೆ. ಯಾರಿಂದವೇ ಆಗಲಿ, ಅಂತವರ ವಿರುದ್ಧ ದೇಶದ್ರೋಹದ ಕೇಸ್ ಹಾಕಿ ಶಿಕ್ಷೆಗೆ ಒಳಪಡಿಸಬೇಕಿದೆ. ಬೋರ್ಡ್ ಬರೆದವರ ಬಗ್ಗೆಯೂ ತನಿಖೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸರು, ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಮುಂದಾಗಬೇಕು. ತಪ್ಪಿತಸ್ಥನ ಬಂಧನವಾಗದೇ ಇದ್ದಲ್ಲಿ ಕ್ಷೇತ್ರದ ಶಾಸಕ, ಸಚಿವ ಸುನೀಲ್ ಕುಮಾರ್ ಅವರು ಮಂತ್ರಿಸ್ಥಾನದಲ್ಲಿರಲು ಅನರ್ಹರು ಎಂದು ಮಮತಾ ಗಟ್ಟಿ ಹೇಳಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ ರಾವ್, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಜನಿ ಹೆಬ್ಬಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನಾ, ಪುರಸಭಾ ಸದಸ್ಯ ಸೋಮನಾಥ ನಾಯ್ಕ್, ಕಾಂಗ್ರೆಸ್ ಮುಖಂಡರಾದ ರವಿಶಂಕರ್ ಶೇರಿಗಾರ್, ಸುಧಾಕರ್ ಕೋಟ್ಯಾನ್, ಪ್ರಭಾಕರ್ ಬಂಗೇರಾ, ಜಾರ್ಜ್ ಕ್ಯಾಸ್ತೋಲಿನೋ, ಶುಭದ ಆಳ್ವಾ, ಮಲ್ಲಿಕಾ ಪಕ್ಕಲ, ಥೋಮಸ್ ಮಸ್ಕರೇನ್ಹಸ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…