ಉಡುಪಿ

ಕಾರ್ಕಳ: ಗೋಪೂಜೆಯ ಶುಭ ದಿನದಂದು ಅಶಕ್ತ ಕುಟುಂಬಗಳಿಗೆ ‘ಗೋ ದಾನ’ – Vishwanews24

ಕಾರ್ಕಳ: ಗೋಪೂಜೆಯ ಶುಭ ದಿನದಂದು ಅಶಕ್ತ ಕುಟುಂಬಗಳಿಗೆ ‘ಗೋ ದಾನ’ – Vishwanews24

ಕಾರ್ಕಳ: ಗೋಪೂಜೆಯ ಶುಭ ದಿನದಂದು ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ವಿನೂತನ ಹೆಜ್ಜೆ ಇಟ್ಟಿರುವ ರವೀಂದ್ರ ಶೆಟ್ಟಿ ಬಜಗೋಳಿಯವರಿಂದ “ಗೋ ದಾನ” ಕಾರ್ಯಕ್ರಮ ನಡೆಯಿತು.

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಇಂದು ಬಜಗೋಳಿಯಲ್ಲಿ ನಡೆಯಿತು. ಸಂಘದ ಹಿರಿಯ ಮುಖಂಡ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು. ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ತಮ್ಮ ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು. ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿಗಳು ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿಗಳ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.

ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

1 minute ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

20 minutes ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

27 minutes ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

42 minutes ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

51 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago