ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಮಾರ್ಚ್ 6ರ ಭಾನುವಾರ ಸಂಭವಿಸಿದೆ.
ಪರಿಶಿಷ್ಟ ಜಾತಿಗೆ ಸೇರಿದ ಶೇಖರ್ (50) ಕೊಲೆಯಾದವರು. ಅವರ ಕಿರಿಯ ಸಹೋದರ ರಾಜು (35) ಕೊಲೆ ಮಾಡಿದ ಆರೋಪಿ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಕೊಲೆ ನಡೆದಿದೆ.ಶೇಖರ್ ಮತ್ತು ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದರು.ಶೇಖರ್ ತನ್ನ ತಾಯಿಗೆ ಮಂಜೂರಾದ ಜಮೀನಿನಲ್ಲಿ ವಾಸವಾಗಿದ್ದರು. ಈ ಹಿಂದೆ ಶೇಖರ್ ಜತೆ ವಾಸವಾಗಿದ್ದ ರಾಜು ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪ್ರತ್ಯೇಕವಾಗಿ ಶೆಡ್ನಲ್ಲಿ ವಾಸಿಸಲು ಆರಂಭಿಸಿದ್ದರು. ಭಾನುವಾರ, ಶೇಖರ್ ತನ್ನ ಮನೆ ಅಂಗಳದಲ್ಲಿ ಕೆಲಸದಲ್ಲಿ ನಿರತನಾಗಿದ್ದರು ಮತ್ತು ಮೂವರು ಕಾರ್ಮಿಕರ ಸಹಾಯದಿಂದ ಜಲ್ಲಿಕಲ್ಲನ್ನು ತನ್ನ ಮನೆಗೆ ಸಾಗಿಸುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ ಆಗಮಿಸಿದ ರಾಜು ದುರಸ್ತಿ ಕೆಲಸ ಮಾಡದಂತೆ ಆಕ್ಷೇಪಿಸಿದ್ದ. ಅದಕ್ಕೆ ಶೇಖರ್ ಕಿವಿಗೊಡದೆ ತನ್ನ ಪಾಡಿಗೆ ಕೆಲಸ ಮುಂದುವರಿಸಿದ್ದರು.
ಈ ವೇಳೆ ಬೆದರಿಕೆ ಹಾಕಿ ಮನೆಯೊಳಗೆ ತೆರಳಿದ ರಾಜು ಚೂರಿಯನ್ನು ಜತೆಗೆ ತಂದು ಅಣ್ಣನ ಕುತ್ತಿಗೆ ಮತ್ತು ಹೊಟ್ಟೆಗೆ ತಿವಿದಿದ್ದಾನೆ. ಗಂಭೀರ ಗಾಯಗೊಂಡು ಅತೀವ ರಕ್ತಸ್ರಾವದಿಂದ ಶೇಖರ್ ಮೃತಪಟ್ಟಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…