ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ.
ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಜೀವ ಕಳೆದುಕೊಂಡವಳು.
ಮೇ 26ರ ಸಂಜೆ 4:00 ಗಂಟೆಗೆ ಮನೆ ಪರಿಸರದಲ್ಲಿ ಸಂಬಂಧಿಕ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿತ್ತು.
ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಆರೋಗ್ಯ ತಪಾಸಣೆ ನಡೆಸಿದ್ದು ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…