Featured

ಕಾರ್ಕಳ: ಜ. 22ರಿಂದ 26ರವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ: ಜ. 22ರಿಂದ 26ರವರೆಗೆ ಅತ್ತೂರು ಜಾತ್ರೆ – ಭಿಕ್ಷಾಟನೆ ನಿಷೇಧ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಎಂದೆಂದಿಗೂ ಶಾಂತಿ-ಸೌಹಾರ್ದತೆ ನೆಲೆಬೀಡಾಗಿ ಉಳಿಯಲಿದೆ. ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಯ ಜೊತೆಗೆ ದೇವರ ಮೇಲಿನ ನಂಬಿಕೆಯೂ ಮಾನವನ ಆಯುಷ್ಯ ವೃದ್ಧಿಯನ್ನುಂಟು ಮಾಡುತ್ತದೆ. ಇದರ ಮೇಲೆ ನಂಬಿಕೆಯಿಂದಲೇ ಸಂತ ಲಾರೆನ್ಸ್ ಬಸಿಲಿಕಾಕ್ಕೆ ಭಕ್ತಾದಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಜನವರಿ 22ರಿಂದ 26ರ ತನಕ ಜರಗಲಿರುವ ವಾರ್ಷಿಕ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿದೆ ಎಂದು ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ರೆಕ್ಟರ್ ಅತೀ ವಂದನೀಯ ಆಲ್ವನ್ ಡಿಸೋಜಾ ಹೇಳಿದರು.

ನೀವು ನನಗೆ ಸಾಕ್ಷಿಗಳಾಗುವಿರಿ-ಎಂಬ ಮಹೋತ್ಸವದ ವಿಷಯದೊಂದಿಗೆ ನಡೆಯುವ ಈ ೫ ದಿನಗಳ ಉತ್ಸವದ ಅವಧಿಯಲ್ಲಿ ಒಟ್ಟು 35 ಬಲಿ ಪೂಜೆಗಳು ನಡೆಯಲಿದೆ. ಜ. ೨೨ರ ಪೂರ್ವಾಹ್ನ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ಪರಮ ಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ, ಜ. 23ರಂದು ಬೆಳಿಗ್ಗೆ 10 ಗಂಟೆಗೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ಪರಮ ಪೂಜ್ಯ ಜೀವರ್ಗಿಸ್ ಮಾರ್ ಮಕರಿಯೋಸ್ ಕಲಯಿಲ್, ಜ. 24ರಂದು ಸಂಜೆ 6 ಗಂಟೆಗೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲೊರೆನ್ಸ್ ಮುಕ್ಕುಝಿ, ಜ. 25 ರಂದು ಬೆಳಿಗ್ಗೆ 10 ಗಂಟೆಗೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪರಮ ಪೂಜ್ಯ ಆಲೋಷಿಯಸ್ ಪಾವ್ಲ್ ಡಿ’ಸೋಜಾ , ಜ. ೨೬ರಂದು ಬೆಳಿಗ್ಗೆ 10 ಗಂಟೆಗೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ಪರಮ ಪೂಜ್ಯ ಬರ್ನಾರ್ಡ್ ಮೊರಾಸ್ ಅವರು ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಿಸಲಿರುವರು.

ಮಹೋತ್ಸವದ ದಿನಗಳಲ್ಲಿ ಪ್ರತಿದಿನ ಪೂರ್ವಾಹ್ನ 8, 10, 12, ಅಪರಾಹ್ನ 2, 4, 6, 8 ಗಂಟೆಗೆ ಸೇರಿದಂತೆ ೭ ಬಲಿಪೂಜೆಗಳು ನಡೆಯಲಿರುವುದು. ಜ. ೨೧ರಂದು ಮಧ್ಯಾಹ್ನ 3.30 ಗಂಟೆಗೆ ಅಸ್ವಸ್ಥರಿಗಾಗಿ ದಿವ್ಯ ಬಲಿಪೂಜೆ, ಆರಾಧನೆ ಹಾಗೂ ಪರಮ ಪ್ರಸಾದದ ಮೆರವಣಿಗೆ ಇರಲಿರುವುದು ಎಂದು ಬಸಿಲಿಕಾದ ರೆಕ್ಟರ್ ಅತೀ ವಂದನೀಯ ಅಲ್ಬನ್ ಡಿ’ಸೋಜಾ ತಿಳಿಸಿದ್ದಾರೆ.

ಭಿಕ್ಷಾಟನೆ ನಿಷೇಧ:
ಅತೀ ಪುರಾತನ ಧಾರ್ಮಿಕ ನೆಲೆಬೀಡು ಅತ್ತೂರು ಪುಣ್ಯ ಕ್ಷೇತ್ರದಲ್ಲಿ ಅನಾಧಿ ಕಾಲದಿಂದಲೂ ಭಿಕ್ಷಾಟನೆಗೆ ಮಹತ್ವ ನೀಡುತ್ತಾ ಬಂದಿದೆ. ಅದಕ್ಕಾಗಿ ಭಿಕ್ಷಾ ಪಾತ್ರೆಗಳನ್ನು(ಕಾಣಿಕೆ ಡಬ್ಬಿಗಳನ್ನು) ಇರಿಸಲಾಗುತ್ತಿತ್ತು. ಕನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ -1975 ರ ಸನ್ವಯ ಭಿಕ್ಷಾಟನೆ ಅಪರಾಧವಾಗಿರುವುದರಿಂದ ಜಾತ್ರಮಹೋತ್ಸವದ ಅಂತಿಮ ದಿನದಂದು ಭಿಕ್ಷುಕರಿಗೆ ನೀಡುತ್ತಿದ್ದ ಆಹಾರದ ಪೊಟ್ಟಣದ ಜೊತೆಗೆ ಹಣ(ಭಿಕ್ಷೆ) ನೀಡುವ ಕ್ರಮವನ್ನು ಕೈಬಿಡಲಾಗಿತ್ತು.

ಸಾಂಪ್ರದಾಯಿಕ ಭಿಕ್ಷಾಟಣೆಯು ಭಕ್ತಾದಿಗಳು ಹರಕೆಯ ರೂಪದಲ್ಲಿ ಸಲ್ಲಿಸುವ ಕುರಿತು ಬಸಿಲಿಕಾದ ಆಡಳಿತ ಮಂಡಳಿಯ ಗಮನಕ್ಕೆ ತರುವು ಮೂಲಕ ಸಾಧಕ_ಭಾದಕಗಳ ಕುರಿತು ಚರ್ಚೆ ನಡೆಸಿ ಜಿಲ್ಲಾಡಳಿತದ ನಿರ್ದೇಶನದಂತೆ ಮಂದಿನ ವರ್ಷ ಕ್ರಮ ಕೈಗೊಳ್ಳುವ ಭರವಸೆಯನ್ನು ಇದೇ ಸಂದರ್ಭದಲ್ಲಿ ಬಸಿಲಿಕಾದ ರೆಕ್ಟರ್ ಅತೀ ವಂದನೀಯ ಅಲ್ವನ್ ಡಿಸೋಜಾ ಮಾಹಿತಿ ನೀಡಿದ್ದಾರೆ.

ಬಸಿಲಿಕಾದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ಪ್ರಧಾನ ಕಾರ್ಯದರ್ಶಿ ಬೆನೆಡಿಕ್ಟ್ ನೊರೋನ್ಹಾ ಉಪಸ್ಥಿತರಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

17 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

17 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

17 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

20 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

20 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

20 hours ago