ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಬಲಿಪೂಜೆಗಳ ಸಮಯವನ್ನು ನಿಗದಿಪಡಿಸಲಾಗಿದ್ದು, ಎಲ್ಲ ತಯಾರಿಯೂ ನಡೆಯುತ್ತಿದೆ.
ಮಹೋತ್ಸವದ ಮೊದಲ ದಿನ ಜ. 25ರ ಬೆಳಗ್ಗೆ 7.30ಕ್ಕೆ ಪ್ರಥಮ ಪೂಜೆ ಆರಂಭಗೊಳ್ಳಲಿದ್ದು, ರಾತ್ರಿ 9.30ಕ್ಕೆ ಕೊನೆಯ ಪೂಜೆ ನೆರವೇರಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಮಕ್ಕಳಿಗಾಗಿ ವಿಶೇಷ ಬಲಿಪೂಜೆ ಇರಲಿದೆ.
ಜ. 26 ಮತ್ತು 27ರಂದು ಬೆಳಗ್ಗೆ 8ರಿಂದ ರಾತ್ರಿ 10ರ ವರೆಗೆ ಸತತವಾಗಿ ಬಲಿ ಪೂಜೆಗಳು ನಡೆಯಲಿವೆ. ಜ. 28ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9.30 ಗಂಟೆ ಯವರೆಗೆ ವಿವಿಧ ಹಂತಗಳಲ್ಲಿ ಪೂಜಾ ವಿಧಿವಿಧಾನಗಳು ಜರಗಲಿವೆ.
ಮಹೋತ್ಸವದ ಕೊನೆಯ ದಿನ ಜ.29ರಂದು ಬೆಳಗ್ಗೆ 8ರಿಂದ ಮೊದಲ ಪೂಜೆ ಹಾಗೂ ಸಂಜೆ 6ಕ್ಕೆ ಕೊನೆಯ ಬಲಿಪೂಜೆ ನೆರವೇರಲಿದೆ. ಅಂದು ರಾತ್ರಿ ಕನ್ನಡ ಯಕ್ಷಗಾನವೊಂದು ಪ್ರದರ್ಶನಗೊಳ್ಳಲಿದೆ.
ಜ. 16ರಿಂದ ನೊವೆನಾ ಪ್ರಾರ್ಥನೆಗಳು ಆರಂಭವಾಗಲಿದ್ದು, ಜ.24ರಂದು ಅಸ್ವಸ್ಥರಿಗಾಗಿ ವಿಶೇಷ ಬಲಿಪೂಜೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಭಕ್ತರ ಸುಗಮ ಸಂಚಾರಕ್ಕಾಗಿ ಇಗರ್ಜಿ ವಠಾರಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ರೆ| ಆಲ್ಬನ್ ಡಿ’ಸೋಜ ಪ್ರಕಟನೆ ತಿಳಿಸಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…