Featured

ಕಾರ್ಕಳ : ಜ.25 ರಿಂದ 29 ರ ವರೆಗೆ ಅತ್ತೂರು ಜಾತ್ರೆ – vishwanews24

ಕಾರ್ಕಳ: ಜ.25-29ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಬಲಿಪೂಜೆಗಳ ಸಮಯವನ್ನು ನಿಗದಿಪಡಿಸಲಾಗಿದ್ದು, ಎಲ್ಲ ತಯಾರಿಯೂ ನಡೆಯುತ್ತಿದೆ.

ಮಹೋತ್ಸವದ ಮೊದಲ ದಿನ ಜ. 25ರ ಬೆಳಗ್ಗೆ 7.30ಕ್ಕೆ ಪ್ರಥಮ ಪೂಜೆ ಆರಂಭಗೊಳ್ಳಲಿದ್ದು, ರಾತ್ರಿ 9.30ಕ್ಕೆ ಕೊನೆಯ ಪೂಜೆ ನೆರವೇರಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಮಕ್ಕಳಿಗಾಗಿ ವಿಶೇಷ ಬಲಿಪೂಜೆ ಇರಲಿದೆ.

ಜ. 26 ಮತ್ತು 27ರಂದು ಬೆಳಗ್ಗೆ 8ರಿಂದ ರಾತ್ರಿ 10ರ ವರೆಗೆ ಸತತವಾಗಿ ಬಲಿ ಪೂಜೆಗಳು ನಡೆಯಲಿವೆ. ಜ. 28ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9.30 ಗಂಟೆ ಯವರೆಗೆ ವಿವಿಧ ಹಂತಗಳಲ್ಲಿ ಪೂಜಾ ವಿಧಿವಿಧಾನಗಳು ಜರಗಲಿವೆ.

ಮಹೋತ್ಸವದ ಕೊನೆಯ ದಿನ ಜ.29ರಂದು ಬೆಳಗ್ಗೆ 8ರಿಂದ ಮೊದಲ ಪೂಜೆ ಹಾಗೂ ಸಂಜೆ 6ಕ್ಕೆ ಕೊನೆಯ ಬಲಿಪೂಜೆ ನೆರವೇರಲಿದೆ. ಅಂದು ರಾತ್ರಿ ಕನ್ನಡ ಯಕ್ಷಗಾನವೊಂದು ಪ್ರದರ್ಶನಗೊಳ್ಳಲಿದೆ.

ಜ. 16ರಿಂದ ನೊವೆನಾ ಪ್ರಾರ್ಥನೆಗಳು ಆರಂಭವಾಗಲಿದ್ದು, ಜ.24ರಂದು ಅಸ್ವಸ್ಥರಿಗಾಗಿ ವಿಶೇಷ ಬಲಿಪೂಜೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಭಕ್ತರ ಸುಗಮ ಸಂಚಾರಕ್ಕಾಗಿ ಇಗರ್ಜಿ ವಠಾರಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ರೆ| ಆಲ್ಬನ್ ಡಿ’ಸೋಜ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago