Featured

ಕಾರ್ಕಳ : ಜ.26 ರಿಂದ 30 ರ ವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ: ಜ.26-30ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿರುವುದು. “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದು ಮಹೋತ್ಸವದ ವಿಷಯವಾಗಿದೆ.

ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದೆ. ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ.

ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ಜರಗಲಿದ್ದು, ಉಡುಪಿ ಶೇಷ್ಠ ಧರ್ಮಗುರು ಅ.ವಂ.ಫರ್ಡಿನಾಂಡ್ ಗೋನ್ಸಾಲ್ವಿಸ್ ನೆರವೇರಿಸಲಿದ್ದಾರೆ.

ಜನವರಿ 28ರಂದು ಸಾಯಂಕಾಲ 5.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಲಿದೆ. ಬೆಳ್ತಂಗಡಿ ಧರ್ಮಾಧ್ಯಕ್ಷ ಪರಮಪೂಜ್ಯ ಲೋರೆನ್ಸ್ ಮುಕ್ಕುಝೀ ನೆರವೇರಿಸಲಿದ್ದಾರೆ.

ಜನವರಿ 29ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಲಿದೆ. ಮಂಗಳೂರು ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಅಲೋಶಿಯಸ್ ಪಾವ್ಲ್ ಸೊಜ್ ನೆರವೇರಿಸಲಿದ್ದಾರೆ.

 

ಜನವರಿ 30ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಲಿದೆ. ಬಾರುಯಿಪುರ್ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಸಾಲ್ವದೊರ್ ಲೋಬೋ ನೆರವೇರಿಸಲಿದ್ದಾರೆ,*ಸಂತ ಲೋರೆನ್ಸರ ಗೌರವಾರ್ಥ ನವೇನ ಪ್ರಾರ್ಥನೆಯು ಜನವರಿ 17ರಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 9 ಗಂಟಗೆ ಆರಾಧನೆ, 9.30ಕ್ಕೆ ಬಲಿಪೂಜೆ ನವೇನಕ್ಕೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮುಡ್ದಮ್ ಸೂಕ್ತ ಸಮಯದಲ್ಲಿ ಕಳುಹಿಸಬಹುದು.

ಜನವರಿ 26ರಂದು ರವಿವಾರ ಮಕ್ಕಳಿಗೋಸ್ಕರ ವಿಶೇಷ ಬಲಿಪೂಜೆ ಇರುವುದು. ಆ ದಿನದ ಪ್ರಥಮ ಪೂಜೆ ಬೆಳಿಗ್ಗೆ 7.30ಕ್ಕೆ ಕೊನೆಯ ಪೂಜೆ ರಾತ್ರಿ 8ಗಂಟಗೆ ನೆರವೇರಲಿರುವುದು.

ಜನವರಿ 27ರಂದು ಸೋಮವಾರ ಬೆಳಿಗ್ಗೆ 10.00 ಗಂಟಗೆ ಮಧ್ಯಾಹ್ನ 3 ಗಂಟೆಗೆ ಹಾಗೂ ಸಂಜೆ 6.00 ಗಂಟಗೆ ದಿವ್ಯಬಲಿಪೂಜೆ ಇರುವುದು. ಆ ಸಿನದಂದು ರೋಗಿಗಳಿಗಾಗಿ ವಿಶೇಷ ಪೂಜೆ ಹಾಗೂ ಆ ದಿನ ಮಾತ್ರ ರೋಗಿಗಳ ವಾಹನಗಳನ್ನು ಇಗರ್ಜಿಯ ವಠಾರಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಹಬ್ಬದ ಬೇರೆ ದಿನಗಳಲ್ಲಿ ವಾಹನಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಜನವರಿ 28ರಂದು ಹಾಗೂ ಜನವರಿ 29ರಂದು ಪ್ರಥಮ ಪೂಜೆ ಬೆಳಿಗ್ಗೆ 8.00 ಗಂಟೆಗೆ ಹಾಗೂ ಕೊನೆಯ ಪೂಜೆ ರಾತ್ರಿ 10.00ಗಂಟೆಗೆ ನೆರವೇರಲಿದೆ.

ಜನವರಿ 30ರಂದು ಪ್ರಥಮ ಪೂಜೆ ಬೆಳಿಗ್ಗೆ 8.00ಗಂಟೆಗೆ ಹಾಗೂ ಕೊನೆಯ ಪೂಜೆ ರಾತ್ರಿ 8.30ಕ್ಕೆ ನೆರವೇರಲಿದೆ.

ಪುಣ್ಯಕ್ಷೇತ್ರದ ವಠಾರದಲ್ಲಿ ಹರಕೆಯ ಮೊಂಬತ್ತಿ ಹಾಗೂ ಧಾರ್ಮಿಕ ವಸ್ತುಗಳು ಪುಣ್ಯಕ್ಷೇತ್ರದ ಸ್ಟಾಲ್‌ನಲ್ಲಿ ಸಿಗುವುದು. ಹರಕೆಯ ಪೂಜೆಗಳನ್ನು ಸ್ವೀಕರಿಸುವ ವ್ಯವಸ್ಥೆ ಇರುವುದು. ನವೇನದ ದಿನಗಳಲ್ಲಿ ಹಾಘೂ ಹಬ್ಬದ ದಿನಗಳಲ್ಲಿ ಭಕ್ತಾದಿಗಳಿಗೆ ವಿಶೇಷ ಪಾಪ ನಿವೇದನೆಯ ವ್ಯವಸ್ಥೆ ಇರುವುದು ಎಂದು ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ, ಸಂತ ಲೋರೆನ್ಸ್ ಬಸಿಲಿಕಾ ಆಡಳಿತ ಸಮಿತಿಯ ರೆಕ್ಟರ್ ಅ.ವಂ.ಅಲ್ಬನ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

58 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago