ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪ್ ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ತೆಲಂಗಾಣದ ಟೆಂಡೂರ್ ಕ್ಷೇತ್ರದ ಶಾಸಕ ಪಂಚುಗುಲ ರೋಹಿತ್ ರೆಡ್ಡಿ ಚಲಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಜೀಪ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ವಾಹನದಲ್ಲಿ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.
ಶಾಸಕ ರೋಹಿತ್ ರೆಡ್ಡಿ ಹೈದರಾಬಾದ್ನಿಂದ ಮಂಗಳೂರು ಏರ್ಪೋರ್ಟ್ಗೆ ಇಂದು ಬೆಳಗ್ಗೆ ಆಗಮಿಸಿದ್ದರು. ಬಳಿಕ ಅವರು ಕಾರ್ಕಳ ಮಾರ್ಗವಾಗಿ ಶೃಂಗೇರಿ ಭೇಟಿಗೆ ಹೊರಟಿದ್ದರು. ಈ ವೇಳೆ ಇಲ್ಲಿನ ಮುಡಾರು-ನಲ್ಲೂರು ಕ್ರಾಸ್ ಬಳಿ ಕಾರಿನ ಟಯರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದೆ.
ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂಗೊಂಡಿದೆ. ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…