Featured

ಕಾರ್ಕಳ: ದೇಶದ ಪಾಲಿಗೆ ಕಾಂಗ್ರೆಸ್ ಮುಳುವು : ಸುನಿಲ್‌ಕುಮಾರ್  – Vishwanews24

ಕಾರ್ಕಳ: ದೇಶದ ಪಾಲಿಗೆ ಕಾಂಗ್ರೆಸ್ ಮುಳುವು : ಸುನಿಲ್‌ಕುಮಾರ್

ಕಾರ್ಕಳ:ವೀರಪ್ಪ ಮೊಯಿಲಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾಗ ಅವಧಿಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜರೋಹಣ ನೆರವೇರಿಸಲು ಮುಂದಾದ ದೇಶ ಭಕ್ತರ ಮೇಲೆ ಗುಂಡು ಹಾರಾಟ ನಡೆದಿತ್ತು. ಈ ಘಟನಾವಳಿಯನ್ನು ಮರೆತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರು ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಸವಿನೆನಪಿನ ಅಮೃತ ಮಹೋತ್ಸವ ಸಂಭ್ರಮದ ಹೊತ್ತು ಕಾಂಗ್ರೆಸ್ ಕಾಲ್ನಡಿಗೆ ಜಾಥ ನಡೆಸಿ ಬಿಜೆಪಿಯನ್ನು ಟೀಕಿಸುತ್ತಿರುವುದು ಆ ಪಕ್ಷದ ಮುಖಂಡರ ಲೇವಡಿತನವಾಗಿದೆ ಜಗಜಾಹೀರುಗೊಂಡಿದೆ ಎಂದು ಎಂದು ಇಂಧನ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್ ಆರೋಪಿಸಿದರು.

ಕಾರ್ಕಳದಲ್ಲಿ ಅಮೃತಮಹೋತ್ಸವ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಇಂದು ಬಿಜೆಪಿಯ ಸರ್ವಾಂಗೀಣ ಆಡಳಿತವನ್ನು ಪ್ರಶ್ನಿಸುತ್ತಿದೆ. ಕಾಂಗ್ರೆಸ್ ಇಷ್ಟು ವರ್ಷ ಯಾವ ರೀತಿ ಆಳ್ವಿಕೆ ಮಾಡಿತ್ತು. ಕಾಂಗ್ರೆಸ್‌ಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ. ಸಂವಿಧಾನವನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿ ಅಗೌರವ ಕೊಡುತ್ತ ಬಂದಿದೆ. ಅಮೃತ ಮಹೋತ್ಸವವನ್ನು ಸಂಭ್ರಮ ಮಾಡುವಂತ ಕಾಲದಲ್ಲಿ ಕಾಂಗ್ರೆಸ್ಸು ಟೀಕೆಯಲ್ಲಿ ತೊಡಗಿದೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಸಾಕಷ್ಟು ಟೀಕೆಗಳನ್ನು ಮಾಡುತ್ತ ಬಂದಿದ್ದರೂ ಯಾವುದೇ ವೇದಿಕೆಗಳನ್ನು ಟೀಕೆಗೆ ಬಳಸಿಕೊಂಡಿಲ್ಲ. ಅಭಿವೃದ್ಧಿ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತ ಬರುತ್ತಿದೆ ಎಂದು ನೇರ ವಾಗ್ದಾಳಿ ನಡೆಸಿದರು.

ಕಾರ್ಕಳದಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮಾರ್ಪಡಿ ವೀರಪ್ಪ ಮೊಯಿಲಿಯವರು ಶಪಥ ಮಾಡಿದ್ದಾರೆ. ವೀರಪ್ಪ ಮೊಯಿಲಿ ಅವರು ಶಾಸಕರಾಗಿ ೬ ಬಾರಿ ಆಯ್ಕೆಗೊಂಡಿದ್ದು, ಮಾತ್ರವಲ್ಲದೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದರು. ಅವರ ಮಾಡದಂತಹ ಅಭಿವೃದ್ಧಿ ಸತ್ಕಾರ್ಯಗಳು ಇದೀಗ ಅದೇ ಕಾರ್ಕಳ ಕ್ಷೇತ್ರದಲ್ಲಿ ನಾಗಲೋಟದಲ್ಲಿ ನಡೆಯುತ್ತಾ ಬಂದಿರುವುದು ಅವರಿಗೆ ಸಹಿಸಿಕೊಳ್ಳಲಾಗದಂತಹ ದಿಶೆಗಳು ಎದುರಾಗಿದೆ ಎಂದು ತಿರುಗೇಟು ನೀಡಿದರು.

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ – Vishwanews24

ಸ್ವಾತಂತ್ರ್ಯ ಬಂದ ನಂತರ 3 ಯುದ್ಧಗಳು ಸಂಭವಿಸಿವೆ. 3 ಯುದ್ಧ ನಡೆದಾಗ ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಎಲ್ಲ ಯುದ್ಧದದಲ್ಲಿ ಸೋಲುಂಡು ಭೂಮಿ ಕಳೆದುಕೊಂಡೆವು. ಕಾಂಗ್ರೆಸ್‌ಗೆ ದೇಶದ ಬಗ್ಗೆ ರಾಷ್ಟ್ರ ಧ್ವಜದ ಬಗ್ಗೆ ಗೌರವವೇ ಇಲ್ಲ. ಬಿಜೆಪಿ ಅಧಿಕಾರಲ್ಲಿ ಇದ್ದಾಗ ಕಾರ್ಗಿಲ್ ಹೋರಾಟ ನಡೆಯಿತು. ಒಂದಿಂಚು ಭೂಮಿಯನ್ನು ಬಿಟ್ಟು ಕೊಟ್ಟಿಲ್ಲ ಬಿಜೆಪಿಯ ರಾಷ್ಟ್ರ ಪ್ರೇಮ, ರಾಷ್ಟೃ ಧ್ವಜದ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ. ಸ್ವಾತಂತ್ರ್ಯ ಬಂದ ನಂತರ ನಕಲಿ ಗಾಂಧಿ ಕುಟುಂಬಕ್ಕೆ ದೇಶವನ್ನು ಅಡವಿಟ್ಟವರು ಕಾಂಗ್ರೆಸ್ಸಿಗರು. ಅಮೃತ ಮಹೋತ್ಸವವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಇವತ್ತು ಮೌನ ಬಿಟ್ಟು ಮಾತನಾಡಬೇಕಾಯಿತು ಎಂದು ಹರಿಹಾಯ್ದರು.

ತಾಲೂಕಿನಲ್ಲಿ ಸುಮಾರು 50 ಸಾವಿರ ಮನೆಗಳಿದ್ದು, 60ರಿಂದ 7 ಸಾವಿರ ಅಂಗಡಿ ಮಂಗಟ್ಟುಗಳಿವೆ. ಎಲ್ಲ ಮನೆ, ಅಂಗಡಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ಬಿಜೆಪಿ ಕಾರ್ಯಕರ್ತರು ಜನಪ್ರತಿನಿಧಿಗಳು ಆ.೯ಮತ್ತು 10 ರಂದು ತಿರಂಗ ಧ್ವಜ ಹಾರಿಸಬೇಕು. ಆ.೧೩ರಿಂದ ಸಾರ್ವಜನಿಕವಾಗಿ ಆಚರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು. ಕುಟುಂಬ ಸಮೇತರಾಗಿ ದೇಶಪ್ರೇಮದಿಂದ ಶುಭ್ರ ಬಟ್ಟೆ ಧರಿಸಿ, ರಾಷ್ಟ್ರ ಧ್ವಜಕ್ಕೆ ಅವಮಾನ ಆಗದ ರೀತಿಯಲ್ಲಿ ತಿರಂಗ ಹಾರಿಸಬೇಕು. ಮನೆ ಮುಂದೆ ರಂಗೋಲಿಗಳನ್ನು ಬಿಡಿಸಿ, ಸಿಹಿ ಹಂಚಿ ಹಬ್ಬದ ರೀತಿ ಎಲ್ಲರೂ ಸೇರಿ ಆಚರಿಸುವಂತೆ ಅವರು ಕರೆ ನೀಡಿದರು. ಧ್ವಜ ಖರೀದಿಸಿ ತರಬೇಕು. ಎಲ್ಲದಕ್ಕೂ ಪೂರ್ವ ನಿಶ್ಚಿತ ತಯಾರಿಗಳನ್ನು ನಡೆಸಿಕೊಳ್ಳಬೇಕು. ಯಾವೊಂದು ಮನೆಯೂ ಬಾಕಿಯಾಗದಂತೆ ತ್ರಿವರ್ಣ ಧ್ವಜಾ ಹಾರಾಡುವ ಮೂಲಕ ಕಾರ್ಕಳ ಇತಿಹಾಸದ ಪುಟಗಳಲ್ಲಿ ಸೇರಬೇಕು ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಪ್ರಸ್ತಾವನೆಗೈದರು. ಗೇರು ಅಭಿವ್ರದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಹಿರಿಯರಾದ ಎಂ.ಕೆ ವಿಜಯಕುಮಾರ್ ಮಾತನಾಡಿದರು. ಜಿ ಕಾರ್ಯದರ್ಶಿಗಳಾದ ರವೀಂದ್ರ ಮಡಿವಾಳ, ರೇಶ್ಮಾ ಉದಯ್ ಶೆಟ್ಟಿ, ಯುವ ಮೋರ್ಚಾ ಜಿಧ್ಯಕ್ಷ ವಿಖ್ಯಾತ್ ಶೆಟ್ಟಿ, ತಾಲೂಕು ಮಂಡಲ ಪ್ರ.ಕಾರ್ಯದರ್ಶಿ ಜಯರಾಮ್ ಸಾಲ್ಯಾನ್ ವೇದಿಕೆಯಲ್ಲಿದ್ದರು. ಬಿಜೆಪಿ ಪ್ರ. ಕಾರ್ಯದರ್ಶಿ ನವೀನ್ ನಾಯಕ್ ಸ್ವಾಗತಿಸಿದರು. ಜ್ಯೋತಿ ವಂದೆ ಮಾತರಂ ಹಾಡಿದರು. ಸುಹಾಸ್ ಶೆಟ್ಟಿ ನಿರೂಪಿಸಿದರು.

ಪಡುಬಿದ್ರಿ : ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ : ಪ್ರಕರಣ ದಾಖಲು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago