Featured

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ – Vishwanews24

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ತಿಳಿಸಿದ್ದಾರೆ.

ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ.

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24

ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago