Featured

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ – Vishwanews24

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ತಿಳಿಸಿದ್ದಾರೆ.

ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ.

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24

ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago