Featured

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ – Vishwanews24

ಕಾರ್ಕಳ : ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ತಿಳಿಸಿದ್ದಾರೆ.

ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ.

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24

ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago