ಉಡುಪಿ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ತಿಳಿಸಿದ್ದಾರೆ.
ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ.
ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24
ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ. ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…