Featured

ಕಾರ್ಕಳ: ನಂದಳಿಕೆ ಗ್ರಾಮದ ಗೋಳಿಕಟ್ಟೆಯಲ್ಲಿ ಕಲ್ಲಿನಲ್ಲಿ ಕೆತ್ತಲಾದ ಶಾಸನ ಪತ್ತೆ – Vishwanews24

ಕಾರ್ಕಳ: ನಂದಳಿಕೆ ಗ್ರಾಮದ ಗೋಳಿಕಟ್ಟೆಯಲ್ಲಿ ಕಲ್ಲಿನಲ್ಲಿ ಕೆತ್ತಲಾದ ಶಾಸನ ಪತ್ತೆ – Vishwanews24

ಕಾರ್ಕಳ: ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಕಲ್ಲಿನಲ್ಲಿ ಕೆತ್ತಲಾದ ಶಾಸನವೊಂದು ಪತ್ತೆಯಾಗಿದೆ.

ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪುರಾತತ್ವ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಕಾರ್ತಿಕ್, ಗೌತಮ್, ಶ್ರೇಯಸ್ ಅವರು ಒಂದು ಶಾಸನವನ್ನು ಪತ್ತೆ ಹಚ್ಚಿದ್ದಾರೆ ಎಂದು ಪುರಾತತ್ವ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿ ಅವರು ತಿಳಿಸಿದ್ದಾರೆ.

ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನ, 8 ಸಾಲಿನಲ್ಲಿ ಬರೆಯಲ್ಪಟ್ಟಿದೆ. ಧೀರ್ಘ ಲಿಂಗಾಕೃತಿಯ ಕಲ್ಲಿನ ಒಂದು ಪಾರ್ಶ್ವದ ಮೇಲೆ, ವೃತ್ತಾಕಾರದ ಸೂರ್ಯ, ಅದರ ಕೆಳಭಾಗದಲ್ಲಿ ಅರ್ಧ ಚಂದ್ರಾಕೃತಿಯನ್ನು ಕೊರೆಯಲಾಗಿದೆ. ಈ ಚಿತ್ರಗಳ ಕೆಳಭಾಗದಲ್ಲಿ ದೊಡ್ಡ ದೊಡ್ಡ ಅಕ್ಷರಗಳ ಬರವಣಿಗೆಯಿದೆ. ಈ ಕಲ್ಲು ಸುಮಾರು 167 ಸೆ.ಮೀ. ಎತ್ತರವಿದೆ.

1905ರಲ್ಲಿ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ರ, ಮರಣ ದಾಖಲೆಯಿದು. ಸುಮಾರು 116 ವರ್ಷಗಳ ಹಿಂದೆ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ಟಿ ಆ ಕಾಲದ ಪ್ರಸಿದ್ಧ ವ್ಯಕ್ತಿಯಾಗಿದ್ದಿರಬೇಕು ಎಂದು ಊಹಿಸಲಾಗಿದೆ. ಆ ವ್ಯಕ್ತಿಯ ಮರಣಾ ನಂತರ ಅವರ ಅಂತ್ಯ ಸಂಸ್ಕಾರದ ಜಾಗದಲ್ಲಿ ಈ ವಿಶಿಷ್ಠವಾದ ಕಲ್ಲನ್ನು ನಿಲ್ಲಿಸಲಾಗಿದೆ. 20ನೇ ಶತಮಾನದ ಆದಿ ಭಾಗದಲ್ಲೂ ಶಾಸನಗಳನ್ನು ಬರೆಸುವ ಪದ್ಧತಿ ಕರಾವಳಿಯಲ್ಲಿ ಜೀವಂತವಾಗಿತ್ತೆನ್ನುವುದಕ್ಕೆ ಈ ಶಾಸನ ಉತ್ತಮ ಉದಾಹರಣೆಯಾಗಿದೆ. ಶಾಸನದಲ್ಲಿ ಕ್ರಮವಾಗಿ 1905ನೇ ಲೂ ಬೆಣಿಯ ಅಂಕಯ್ಯ ಶೆಟ್ರು ಎಂಬ ಬರಹವನ್ನು ಕೆತ್ತಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago