Featured

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ – vishwanews24

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ

ಕಾರ್ಕಳ: ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಯನ್ನು ಮತ್ತೆ ಆರಂಭಿಸಲು ಕಂಪನಿ ಅಧಿಕಾರಿಗಳು ಮುಂದಾಗುತ್ತಿದ್ದಂತೆ ವಿಷಯ ತಿಳಿದ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಧಾವಿಸಿ ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ ‌.

ಕೇಂದ್ರ ಬಿಜೆಪಿ ಸರಕಾರದ ಯೋಜನೆ ಇದಾಗಿದ್ದು ರಾಜ್ಯ ಬಿಜೆಪಿ ಸರಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಸುನೀಲ್ ಕುಮಾರ್ ಅನುಮತಿಯಿಂದ ಯೋಜನೆಯುವ ಅನುಮೋದನೆಗೊಂಡಿದೆ. ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಹೈ ಟೆನ್ಷನ್ ವಿದ್ಯುತ್ ತಂತಿಗಳು ಇನ್ನಾ ಗ್ರಾಮದ ಫಲವತ್ತಾದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದ ನಡುವೆ ಹಾದು ಹೋಗುವುದರಿಂದ ಇನ್ನಾ ಗ್ರಾಮದ ನೂರಾರು ಕೃಷಿಕರು ಸಂತ್ರಸ್ತರಾಗುವ ಅಪಾಯವಿದೆ ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಹಲವು ಅವಧಿಗೆ ಶಾಸಕರನ್ನಾಗಿ ಗೆಲ್ಲಿಸಿದ ಕಾರ್ಕಳ ಕ್ಷೇತ್ರದ ಜನರ ಬದುಕಿಗೆ ಕೊಳ್ಳಿ ಇಡುವ ಯೋಜನೆಯನ್ನು ಉಡುಗೊರೆಯಾಗಿ ಕೊಟ್ಟ ಪರಿಣಾಮ ಇಂದು ಇನ್ನಾ ಗ್ರಾಮದ ಜನತೆ ತಮ್ಮ ಕೃಷಿ ಭೂಮಿ ಮನೆಮಠಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ‌ ಎಂದು ಉದಯ್ ಶೆಟ್ಟಿ ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು, ಕೃಷಿಕರು, ಗ್ರಾಮಸ್ಥರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

6 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

6 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

6 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

7 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

10 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

10 hours ago