ಕಾರ್ಕಳ: ನಕಲಿ ನಂಬರ್ ಪ್ಲೇಟ್ ಹಾಗೂ ಗ್ಲಾಸ್ ಗೆ ಟಿಂಟ್ ಕಾರೊಂದಕ್ಕೆ ಅಳವಡಿಸಿ, ದುಷ್ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಟ್ಟೆ ಗ್ರಾಮದ ಬೋರ್ಗಲ್ ಗುಡ್ಡೆ ನಿವಾಸಿ ಉಮ್ಮರ್ ಫಾರೂಕ್ ಪೊಲೀಸರು ವಶಕ್ಕೆ ಪಡೆದ ಆರೋಪಿಯಾಗಿದ್ದಾನೆ. ಈತ ಅ. 16ರಂದು ಕಾರಿನಲ್ಲಿ ತೆರಳುತ್ತಿದ್ದಾರೆ. ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸರು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದು ಹಾಗೂ ಗ್ಲಾಸ್ಗಳಿಗೆ ಟಿಂಟ್ ಅಳವಡಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಮಾತ್ರವಲ್ಲದೇ ಯಾವುದೋ ದುಷ್ಕೃತ್ಯವೆಸಗುವ ದುರುದ್ದೇಶದಿಂದ ಉಮ್ಮರ್ ಫಾರೂಕ್ ಮತ್ತವರ ಸಹಚರರು ಸಂಚು ರೂಪಿಸುತ್ತಿದ್ದರು ಎನ್ನುವುದು ತನಿಖೆ ವೇಳೆ ತಿಳಿದು ಬಂದಿತ್ತು.
ಮಂಗಳೂರಿನ ಧೀರಜ್ ಮತ್ತು ಪ್ರೀತಮ್ರ ಸಹಕಾರದೊಂದಿಗೆ ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿದ್ದು ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ವಿರುದ್ದ ಡ್ರಗ್ಸ್, ಕಳ್ಳತನ, ದರೋಡೆ, ಗೋಕಳ್ಳತನ ಸಹಿತ ವಿವಿಧ ಸಮಾಜ ದ್ರೋಹಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಬಗ್ಗೆ ಹಲವು ಆರೋಪಗಳಿದ್ದು, ಶಿರ್ವ ಸಹಿತ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ಈ ಹಿಂದೆ ದಾಖಲಾಗಿವೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…