Featured

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ – vishwanews24

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಇಂದು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.

ಆರೋಪಿ ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ಧುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಗೊಳಿಸಿತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago