ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್ಕುಮಾರ್ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು.
ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.
ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್ ಕುಮಾರ್ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.
ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್ಚಂದ್ರಪಾಲ್ ನಕ್ರೆ, ವಿವೆಕಾನಂದ ಶೆಣೈ, ದಿನೇಶ್, ಅಜಿತ್ಕುಮಾರ್ ಹೆಗ್ಡೆ, ತಾರಾನಾಥ ಕೋಟ್ಯಾನ್, ದಿನೇಶ್ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…