ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್ಕುಮಾರ್ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು.
ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.
ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್ ಕುಮಾರ್ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.
ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್ಚಂದ್ರಪಾಲ್ ನಕ್ರೆ, ವಿವೆಕಾನಂದ ಶೆಣೈ, ದಿನೇಶ್, ಅಜಿತ್ಕುಮಾರ್ ಹೆಗ್ಡೆ, ತಾರಾನಾಥ ಕೋಟ್ಯಾನ್, ದಿನೇಶ್ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…