Featured

ಕಾರ್ಕಳ : ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ : ಮುನಿಯಾಲು ಉದಯಕುಮಾರ್‌ ಶೆಟ್ಟಿ – vishwanews24

ವಿಗ್ರಹ ನಕಲಿ ಅಲ್ಲ ಎಂದು ಶಾಸಕ ಸುನಿಲ್‌ಕುಮಾರ್‌ ಪ್ರಮಾಣ ಮಾಡಲಿ..

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ..

ಶಾಸಕರು ಕ್ಷಮಾಪಣೆ ಕೇಳಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ :ಮುನಿಯಾಲು ಉದಯಕುಮಾರ್‌ ಶೆಟ್ಟಿ

ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್‌ಕುಮಾರ್‌ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್‌ ಶೆಟ್ಟಿ ಹೇಳಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್‌ ಕುಮಾರ್‌ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್‌ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.

ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್‌ಚಂದ್ರಪಾಲ್‌ ನಕ್ರೆ, ವಿವೆಕಾನಂದ ಶೆಣೈ, ದಿನೇಶ್‌, ಅಜಿತ್‌ಕುಮಾರ್‌ ಹೆಗ್ಡೆ, ತಾರಾನಾಥ ಕೋಟ್ಯಾನ್‌, ದಿನೇಶ್‌ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago