ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್ಕುಮಾರ್ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು.
ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.
ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್ ಕುಮಾರ್ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.
ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್ಚಂದ್ರಪಾಲ್ ನಕ್ರೆ, ವಿವೆಕಾನಂದ ಶೆಣೈ, ದಿನೇಶ್, ಅಜಿತ್ಕುಮಾರ್ ಹೆಗ್ಡೆ, ತಾರಾನಾಥ ಕೋಟ್ಯಾನ್, ದಿನೇಶ್ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…